ಅನಂತಮೂರ್ತಿ ವಾಙ್ಮಯ

ಅನಂತಮೂರ್ತಿ ವಾಙ್ಮಯ

Regular price
$5.99
Sale price
$5.99
Regular price
Sold out
Unit price
per 
Shipping does not apply

 

ಪ್ರಕಾಶಕರು: ಅಕ್ಷರ ಪ್ರಕಾಶನ

Publisher: Akshara Prakashana

 

ಸಣ್ಣ ಕತೆ, ಕಾದಂಬರಿ, ಕವಿತೆ, ನಾಟಕ, ವಿಮರ್ಶೆ, ಅನುವಾದಗಳಿಂದ ಸಮೃದ್ಧವಾಗಿರುವ ಡಾ.ಯು.ಆರ್.ಅನಂತಮೂರ್ತಿ ಅವರ ಸಮಗ್ರ ವಾಙ್ಮಯವನ್ನು ಆಪ್ತವಾಗಿ ಅನುಸಂಧಾನ ಮಾಡಿ ಅದರಿಂದ ಮೂಡುವ ದರ್ಶನವನ್ನು ಕಾಣಿಸುವ ಮಹತ್ವಾಕಾಂಕ್ಷೆ ಈ ಪುಸ್ತಕದಲ್ಲಿ ಕಂಡುಬರುತ್ತದೆ. ಸುಮಾರು ಆರು ದಶಕಗಳ ವಿವಿಧ ಘಟ್ಟಗಳಲ್ಲಿ ವೈವಿಧ್ಯಮಯವಾಗಿ ರೂಪುಗೊಂಡ ಅನಂತಮೂರ್ತಿ ವಾಙ್ಮಯದ ಬಹುಮುಖತೆಯನ್ನೂ ಬಹುಧ್ವನಿಯನ್ನೂ ಸೂಕ್ಷ ವಾಗಿ ಅವಲೋಕಿಸಿರುವ ಟಿ.ಪಿ.ಅಶೋಕ ಅವರ ಈ ಸಮಗ್ರ ಅಧ್ಯಯನವು ನಮ್ಮ ಕಾಲದ ಧೀಮಂತ ಲೇಖಕರೊಬ್ಬರ ಸಿದ್ಧಿ-ಸಾಧನೆಗಳನ್ನು ತೋರಿ ತೂಗಿ ಬೆಲೆಕಟ್ಟುವಲ್ಲಿ ಸಾಕಷ್ಟು ಸಫಲವಾಗಿದೆ. ಆಯಾ ಪ್ರಕಾರಗಳಲ್ಲಿ ಸೂಚಿತವಾಗುವ ಅನನ್ಯತೆಯನ್ನೂ ವಿಶಿಷ್ಟತೆಯನ್ನೂ ಕಾಣಿಸುತ್ತಲೇ ಅವುಗಳ ಸದ್ಯದ ಮತ್ತು ಸಾರ್ವಕಾಲಿಕ ಪ್ರಸ್ತುತತೆಗಳನ್ನು ಮನಗಾಣಿಸಿಕೊಡುವ ಅಶೋಕರ ವಿಮರ್ಶೆಯು ಅನಂತಮೂರ್ತಿಯವರ ಸಮಗ್ರ ಸಾಹಿತ್ಯದ ಆಳ ಅಗಲಗಳನ್ನು ಓದುಗರ ಅನುಭವಕ್ಕೆ ತರುವಲ್ಲಿ ತುಂಬ ಯಶಸ್ವಿಯಾಗಿದೆ. ಬಿಡಿ ಕೃತಿಗಳ ಓದಿನಲ್ಲಿ ಪಡೆದುಕೊಂಡ ಅರಿವನ್ನು ಸಮಗ್ರ ವಾಙ್ಮಯದ ಒಟ್ಟಾರೆ ತಿಳುವಳಿಕೆಗೆ ಹೆಣೆಯುವ, ಸಮಗ್ರ ಸಾಹಿತ್ಯದ ಅಧ್ಯಯನದಲ್ಲಿ ಪಡೆದುಕೊಂಡ ವಿವೇಕದಲ್ಲಿ ಬಿಡಿ ಕೃತಿಗಳ ಸ್ವರೂಪವನ್ನು ಬೆಳಗುವ ಚಲನಶೀಲತೆ ಈ ಪುಸ್ತಕದ ವೈಶಿಷ್ಟ ವಾಗಿದೆ. ಅನಂತಮೂರ್ತಿಯವರ ಸಮಸ್ತ ಬರವಣಿಗೆಯ ಸಾಹಿತ್ಯಿಕ ಮಹತ್ವವನ್ನು ವ್ಯಾಖ್ಯಾನಿಸುವ ಪರಿಕ್ರಮದಲ್ಲೇ ಅದರ ಸಾಮಾಜಿಕ, ರಾಜಕೀಯ ಮತ್ತು ಸಾಂಸ್ಕ ತಿಕ ಹೆಚ್ಚಳವನ್ನೂ ತೋರುವಲ್ಲಿ ಅಶೋಕರ ವಿಮರ್ಶೆಯೂ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ.

 

ಪುಟಗಳು: 216

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !