ಶ್ಮಶಾನ ಕುರುಕ್ಷೇತ್ರಂ

ಶ್ಮಶಾನ ಕುರುಕ್ಷೇತ್ರಂ

Regular price
$1.99
Sale price
$1.99
Regular price
Sold out
Unit price
per 
Shipping does not apply

ಪ್ರಕಾಶಕರು: ಉದಯರವಿ ಪ್ರಕಾಶನ

Publisher: Udayaravi Prakashana

 

ಮೊನ್ನೆ ಬೆಂಗಳೂರಿನಿಂದ ಮೈಸೂರಿಗೆ ರೈಲಿನಲ್ಲಿ ಹೋಗುವಾಗ ಕುವೆಂಪು ವಿರಚಿತ "ಶ್ಮಶಾನ ಕುರುಕ್ಷೇತ್ರಂ" ನಾಟಕ ಓದುತ್ತಿದ್ದೆ. ಕುವೆಂಪುರವರ ಕೃತಿ ಗಳನ್ನೋದುವುದು ಸದಾ ಕಾಲಕ್ಕೂ ರಸಾನುಭವವೇ. ಕಲಿಪುರುಷ ದ್ವಾಪರನಿಗೆ ವಚನವಿತ್ತಂತೆ, ಕಲಿಮಾನವರು ಕುಬ್ಜರಾದರೂ, ಎಲ್ಲರನ್ನೂ ಮೀರಿಸಿದ ಗಟ್ಟಿಗರೇ ಸೈ. ಶ್ಮಶಾನ ರುದ್ರದೇವನು ದ್ವಾಪರನಿಗೆ ತೋರುವ ಕಾಲಜ್ಞಾನದ ತುಣುಕು, ರಸರೋಮಾಂಚನಗೊಳಿಸುವ ಸೆಳಕೇ ಸೈ. ಜಗದೀಶ ಕೃಷ್ಣ ನ ನಾಟಕದಲ್ಲಿ ಎಲ್ಲರೂ ಅಭಿನಯಿಸಿ ನೇಪಥ್ಯಕ್ಕೆ ಸರಿಯುವ ಪಾತ್ರಧಾರಿಗಳೇ. ದುರ್ಯೋಧನನು ಕೌರವ ಕೃಷ್ಣ . ಧರ್ಮಜ ಪಾಂಡವ ಕೃಷ್ಣ . ಸೊಗಸಾದ ಪರಿಕಲ್ಪನೆಯ ಈ ನಾಟಕ, ಕದನದ ಕೇಡನ್ನು ಮೊಗೆಮೊಗೆದು ತೋರುವ, ಅಂತೆಯೇ ಅಧ್ಯಾತ್ಮದ ಅಂತಃದರ್ಶನವನ್ನೂ ನೀಡುವ ಅತಿ ಸುಂದರ ನಾಟಕವನ್ನೋದುವ ಘಳಿಗೆಗಳಲ್ಲಿ ನನ್ನ ಅಂತಃಕರಣ ಕಲಕಿ ಕಣ್ಣೀರಾಗಿ ಹರಿದದ್ದು ಸತ್ಯ. ಇಂತಹ ದರ್ಶನಗಳು ಕಾಲದೇಶಗಳನ್ನು ಮೀರಿ ಚಿಂತನಾಶೀಲ ಮನುಜರೆಲ್ಲರಿಗೂ ಯಾವುದೋ ಒಂದು ಕಾಲಘಟ್ಟದಲ್ಲಿ, ಅರಿಕೆಗೆ ಬರುತ್ತಲೇ ಇರುತ್ತವೆ.

- ಸಂಪದ ವಿಮರ್ಶೆ https://sampada.net/node/31129

 

ಪುಟಗಳು: 46

 

ಈಗ ಓದಿ ಮೈಲ್ಯಾಂಗ್ ಆ್ಯಪ್ ಮೂಲಕ ಎಲ್ಲಿಂದ, ಯಾವಾಗ ಬೇಕಿದ್ದರೂ ನಿಮ್ಮ ಮೊಬೈಲಿನಲ್ಲೇ !